Phone icon  CALL US NOW
080 - 22161900


  • ಮಿಥ್ಯಸುಖ | Mithya Sukha ( Novel )
ಮಿಥ್ಯಸುಖ | Mithya Sukha ( Novel )
10%

ಮಿಥ್ಯಸುಖ | Mithya Sukha ( Novel )

ಮಿಥ್ಯಸುಖ | Mithya Sukha ( Novel )

MRP - ₹365.00 ₹328.50

ನಮ್ಮೊಡನೆ ಜೈವಿಕವಾಗಿ ಹೆಣೆದುಕೊಂಡಿರದ ಆದರೆ ನಾವು ಅನಿವಾರ್ಯವಾಗಿ ಕಟ್ಟಿಕೊಂಡ ಬದುಕಿನ ದೈನಿಕ ಲಯಗಳಲ್ಲಿ ಏನನ್ನೊ ಹುಡುಕುವುದು; ಅನೂಹ್ಯವಾದ, ಅತೀತವಾದ ಹಾಗೆಯೇ ಅಗಮ್ಯವಾದ ಮತ್ತಾವುದೋ ಸೆಳೆತಕ್ಕೆ ಈ ದೈನಿಕ ಲಯಗಳ ನಡುವೆ ಸಿಲುಕುವುದು; ಈ ಎರಡು ತುಯ್ತಗಳ ನಡುವೆ ಸಾಗುವ ಕಥನವಿದು. ಈ ಸೆಳೆತ ಕಾಣದುದರ ಎಡೆಗಿನ ತುಯ್ತವೋ ಅಥವಾ ಕಳೆದ ಅನುಭವವೊಂದರ ಮರುಕಳಿಕೆಯೋ ಎಂಬ ದ್ವಂದ್ವ ಕಾಣುತ್ತದೆ. ದೈನಿಕ ಲಯಗಳ ನಿರೂಪಣೆಯಲ್ಲಿ ನಿರೂಪಕರು ಹೊರಗೆ ನಿಂತು ನೋಡುವ, ಮತ್ತು ಒಳಹೊಕ್ಕು ವಿವರಿಸುವುದನ್ನು ಎಚ್ಚರದಿಂದ ನಿವಾರಿಸಿಕೊಳ್ಳುವ ನೆಲೆಯನ್ನು ಅನುಸರಿಸುತ್ತಾರೆ. ಆದರೆ ಈ ದೈನಿಕ ಲಯಗಳ ನಡುವೆ ತಲೆಯೆತ್ತುವ ದೂರದ ಕರೆಯು ಪದಗಳಲ್ಲಿ, ಕವಿತೆಗಳಲ್ಲಿ, ನಾದದಲ್ಲಿ ಮೈಮುರಿದೇಳುತ್ತಿರುತ್ತದೆ. ಈ ಸೆಳೆತದ ಉತ್ಕಟತೆಗಳು ಒಂದು ಕಡೆ. ಆ ದೂರದ ಕರೆಯು ವಾಸ್ತವವಾಗಿ ಮೈದಳೆಯುವಾಗಿನ ಅನುಭವದಲ್ಲಿ ದಿಟ ಸಟೆಗಳ ನಡುವಣ ಗಡಿಗೆರೆಗಳು ಅಳಿಸಿ ಹೋಗುವುದು ಇನ್ನೊಂದು ಕಡೆ. ಈ ಎರಡು ತುದಿಗಳ ನಡುವಣ ಶೋಧವೇ ಈ ಕಾದಂಬರಿಯ ಗುರಿ ಎಂದು ತಿಳಿದಿರುವೆ. ಅನುಭವ ಕಥನದ ನುಡಿಗಟ್ಟಿಗೂ ಅನುಭವ ಮಂಥನದ ನುಡಿಗಟ್ಟಿಗೂ ಇಲ್ಲಿ ಅಪಾರ ವ್ಯತ್ಯಾಸವಿದೆ. ಅನುಭವ ಕಥನದಲ್ಲಿ ಲೋಕದ ಬಿಂಬವಾಗಲು ನುಡಿಯು ಹವಣಿಸುತ್ತದೆ. ಆದರೆ ಅನುಭವ ಮಂಥನದಲ್ಲಿ ನುಡಿಯು ಮೈದಳೆಯುವ ಮೂಲಕವೇ ಅನುಭವವು ಆಕಾರ ಪಡೆಯುತ್ತದೆ. ಇದೇ ಕಾರಣದಿಂದ ಈ ಎರಡನೆಯ ನೆಲೆಯ ನಿರೂಪಣೆಯು ತೀವ್ರಗೊಂಡಾಗ ಕವಿತೆಗಳಾಗಿ ಮಾರ್ಪಡುವುದನ್ನು ಕಾಣುತ್ತೇವೆ. ಅನುಭವ ಶೋಧದ ಹೊಸ ಮಾದರಿಯನ್ನು ಈ ಕಾದಂಬರಿಯಲ್ಲಿ ಭಾಷಿಕವಾಗಿ ಶೋಧಿಸಿರುವ ಕಾವ್ಯಾ ಕಡಮೆಯವರನ್ನು ಅಭಿನಂದಿಸಲೇಬೇಕು. ಕೆ. ವಿ. ನಾರಾಯಣ




Dispatched within 2 - 3 Business Days

 FREE Home Delivery (For purchase of Rs 499/- and above)

Product Specifications


: 1
: 2025
: Paperback
: 1/8 Demy Size
: .150

ನಮ್ಮೊಡನೆ ಜೈವಿಕವಾಗಿ ಹೆಣೆದುಕೊಂಡಿರದ ಆದರೆ ನಾವು ಅನಿವಾರ್ಯವಾಗಿ ಕಟ್ಟಿಕೊಂಡ ಬದುಕಿನ ದೈನಿಕ ಲಯಗಳಲ್ಲಿ ಏನನ್ನೊ ಹುಡುಕುವುದು; ಅನೂಹ್ಯವಾದ, ಅತೀತವಾದ ಹಾಗೆಯೇ ಅಗಮ್ಯವಾದ ಮತ್ತಾವುದೋ ಸೆಳೆತಕ್ಕೆ ಈ ದೈನಿಕ ಲಯಗಳ ನಡುವೆ ಸಿಲುಕುವುದು; ಈ ಎರಡು ತುಯ್ತಗಳ ನಡುವೆ ಸಾಗುವ ಕಥನವಿದು. ಈ ಸೆಳೆತ ಕಾಣದುದರ ಎಡೆಗಿನ ತುಯ್ತವೋ ಅಥವಾ ಕಳೆದ ಅನುಭವವೊಂದರ ಮರುಕಳಿಕೆಯೋ ಎಂಬ ದ್ವಂದ್ವ ಕಾಣುತ್ತದೆ. ದೈನಿಕ ಲಯಗಳ ನಿರೂಪಣೆಯಲ್ಲಿ ನಿರೂಪಕರು ಹೊರಗೆ ನಿಂತು ನೋಡುವ, ಮತ್ತು ಒಳಹೊಕ್ಕು ವಿವರಿಸುವುದನ್ನು ಎಚ್ಚರದಿಂದ ನಿವಾರಿಸಿಕೊಳ್ಳುವ ನೆಲೆಯನ್ನು ಅನುಸರಿಸುತ್ತಾರೆ. ಆದರೆ ಈ ದೈನಿಕ ಲಯಗಳ ನಡುವೆ ತಲೆಯೆತ್ತುವ ದೂರದ ಕರೆಯು ಪದಗಳಲ್ಲಿ, ಕವಿತೆಗಳಲ್ಲಿ, ನಾದದಲ್ಲಿ ಮೈಮುರಿದೇಳುತ್ತಿರುತ್ತದೆ. ಈ ಸೆಳೆತದ ಉತ್ಕಟತೆಗಳು ಒಂದು ಕಡೆ. ಆ ದೂರದ ಕರೆಯು ವಾಸ್ತವವಾಗಿ ಮೈದಳೆಯುವಾಗಿನ ಅನುಭವದಲ್ಲಿ ದಿಟ ಸಟೆಗಳ ನಡುವಣ ಗಡಿಗೆರೆಗಳು ಅಳಿಸಿ ಹೋಗುವುದು ಇನ್ನೊಂದು ಕಡೆ. ಈ ಎರಡು ತುದಿಗಳ ನಡುವಣ ಶೋಧವೇ ಈ ಕಾದಂಬರಿಯ ಗುರಿ ಎಂದು ತಿಳಿದಿರುವೆ. ಅನುಭವ ಕಥನದ ನುಡಿಗಟ್ಟಿಗೂ ಅನುಭವ ಮಂಥನದ ನುಡಿಗಟ್ಟಿಗೂ ಇಲ್ಲಿ ಅಪಾರ ವ್ಯತ್ಯಾಸವಿದೆ. ಅನುಭವ ಕಥನದಲ್ಲಿ ಲೋಕದ ಬಿಂಬವಾಗಲು ನುಡಿಯು ಹವಣಿಸುತ್ತದೆ. ಆದರೆ ಅನುಭವ ಮಂಥನದಲ್ಲಿ ನುಡಿಯು ಮೈದಳೆಯುವ ಮೂಲಕವೇ ಅನುಭವವು ಆಕಾರ ಪಡೆಯುತ್ತದೆ. ಇದೇ ಕಾರಣದಿಂದ ಈ ಎರಡನೆಯ ನೆಲೆಯ ನಿರೂಪಣೆಯು ತೀವ್ರಗೊಂಡಾಗ ಕವಿತೆಗಳಾಗಿ ಮಾರ್ಪಡುವುದನ್ನು ಕಾಣುತ್ತೇವೆ. ಅನುಭವ ಶೋಧದ ಹೊಸ ಮಾದರಿಯನ್ನು ಈ ಕಾದಂಬರಿಯಲ್ಲಿ ಭಾಷಿಕವಾಗಿ ಶೋಧಿಸಿರುವ ಕಾವ್ಯಾ ಕಡಮೆಯವರನ್ನು ಅಭಿನಂದಿಸಲೇಬೇಕು. ಕೆ. ವಿ. ನಾರಾಯಣ


Books from ಕಾವ್ಯಾ ಕಡಮೆ ನಾಗರಕಟ್ಟೆ, kavya Kadame Nagarakatte

Author-Image
ಕಾವ್ಯಾ ಕಡಮೆ ನಾಗರಕಟ್ಟೆ, kavya Kadame Nagarakatte

Similar Books