
ಸಿರಿವಂತಿಕೆಗೆ ಸರಳ ಸೂತ್ರಗಳು | Sirivantikege Sarala Sutragalu
MRP - ₹180.00 ₹162.00
ನಾನು ಅತ್ಯಂತ ಇಷ್ಟಪಡುವ ವ್ಯಕ್ತಿ ಲೀ ಕ ಶಿಂಗ್ ಹೇಳುತ್ತಾರೆ: ಬದುಕು, ಭವಿಷ್ಯ, ಸಂತೋಷ, ಶ್ರೀಮಂತಿಕೆ ಎಲ್ಲವನ್ನೂ ಪ್ಲಾನ್ ಮಾಡಬಹುದು! ನನ್ನ ಮೇಲೆ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ ಇವರು. ಅವರ ಪ್ರಕಾರ, Life can be designed. Careers can be planned. Happiness can be prepared. ಅಬ್ಬಾ ಅದೆಂತಹ ಸಾಲುಗಳು! ಅದೆಂತಹ ಆತ್ಮಶಕ್ತಿ! ಅದೆಂತಹ ವಿಶ್ವಾಸ! ಅದೆಷ್ಟು ನಂಬಿಕೆ ಅಲ್ವಾ? ಇಂದಿಗೆ 95ರ ಲೀ ಕ ಶಿಂಗ್ 15ನೇ ವಯಸ್ಸಿಗೆ ಶಾಲೆ ಬಿಟ್ಟು ದಿನಕ್ಕೆ 16 ತಾಸು ದುಡಿಯಲು ಶುರು ಮಾಡಿದವರು. ನಿಮಗೆಲ್ಲಾ ಗೊತ್ತಿರಲಿ ಜಗತ್ತಿನ ಮಿಲಿಯನೇರ್ ಮತ್ತು ಬಿಲಿಯನೇರ್ಗಳಲ್ಲಿ 85 ಪ್ರತಿಶತ ಸೆಲ್ಫ್ ಮೇಡ್. ಅವರಿಗೂ ನಿಮ್ಮಂತೆ, ನನ್ನಂತೆ ಫ್ಯಾಮಿಲಿ, ಸಂಪತ್ತು ಅಥವಾ ಗಾಡ್ಫಾದರ್ ಇರಲಿಲ್ಲ. ಇಂದಿಗೆ ಅವರು ಹಾಂಗ್ ಕಾಂಗ್ನ ಅತಿ ದೊಡ್ಡ ಶ್ರೀಮಂತರಲ್ಲಿ ಒಬ್ಬರು! ಜಾಗತಿಕ ಮಟ್ಟದಲ್ಲೂ ಅತಿ ದೊಡ್ಡ ಶ್ರೀಮಂತರ ಸಾಲಿನಲ್ಲಿ ನಿಲ್ಲುತ್ತಾರೆ. ಅವರಿಗೆ ಸಾಧ್ಯವಾದರೆ ಅದು ನಮಗೂ ಸಾಧ್ಯ. ಇಂದಿಗೆ ಶ್ರೀಮಂತಿಕೆಗೆ ಲೀ ಕ ಶಿಂಗ್ ಮಾಡೆಲ್ ಅತ್ಯಂತ ಸೂಕ್ತವಾಗಿದೆ. ಏನಿದು ಲೀ ಕ ಶಿಂಗ್ ಮಾಡೆಲ್ ಎನ್ನುವುದರ ಬಗ್ಗೆ ಪುಸ್ತಕದಲ್ಲಿ ವಿವರವಿದೆ. ಈ ಪುಸ್ತಕದಲ್ಲಿರುವ ಅಧ್ಯಾಯಗಳನ್ನು ಅನುಭವಿಸಿ ಬರೆದದ್ದು. ಅಲ್ಲಲ್ಲಿ ನನ್ನ ಬದುಕಿನ ಸನ್ನಿವೇಶಗಳ ಉಲ್ಲೇಖವನ್ನೂ ಮಾಡಿದ್ದೇನೆ. ಶ್ರದ್ಧೆ, ಬತ್ತದ ಉತ್ಸಾಹ, ಹಂಬಲದ ಬೆಂಬಲವದ್ದಿರೆ ನಾವಂದುಕೊಂಡ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಸಿರಿವಂತಿಕೆಗೆ ಸರಳ ಸೂತ್ರಗಳಿವೆ, ಅವುಗಳನ್ನು ಕೇವಲ ಓದಿ ಮುಂದಕ್ಕೆ ಹೋದರೆ ಪ್ರಯೋಜನವಿಲ್ಲ. ಇಲ್ಲಿನ ಸೂತ್ರಗಳನ್ನು ಅಳವಡಿಸಿಕೊಂಡರೆ ಎಲ್ಲರೂ ಶ್ರೀಮಂತರಾಗಬಹುದು! - Good Luck. - ರಂಗಸ್ವಾಮಿ ಮೂಕನಹಳ್ಳಿ
Dispatched within 2 - 3 Business Days
FREE Home Delivery
(For purchase of Rs 499/- and above)
Product Specifications
ನಾನು ಅತ್ಯಂತ ಇಷ್ಟಪಡುವ ವ್ಯಕ್ತಿ ಲೀ ಕ ಶಿಂಗ್ ಹೇಳುತ್ತಾರೆ: ಬದುಕು, ಭವಿಷ್ಯ, ಸಂತೋಷ, ಶ್ರೀಮಂತಿಕೆ ಎಲ್ಲವನ್ನೂ ಪ್ಲಾನ್ ಮಾಡಬಹುದು! ನನ್ನ ಮೇಲೆ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ ಇವರು. ಅವರ ಪ್ರಕಾರ, Life can be designed. Careers can be planned. Happiness can be prepared. ಅಬ್ಬಾ ಅದೆಂತಹ ಸಾಲುಗಳು! ಅದೆಂತಹ ಆತ್ಮಶಕ್ತಿ! ಅದೆಂತಹ ವಿಶ್ವಾಸ! ಅದೆಷ್ಟು ನಂಬಿಕೆ ಅಲ್ವಾ? ಇಂದಿಗೆ 95ರ ಲೀ ಕ ಶಿಂಗ್ 15ನೇ ವಯಸ್ಸಿಗೆ ಶಾಲೆ ಬಿಟ್ಟು ದಿನಕ್ಕೆ 16 ತಾಸು ದುಡಿಯಲು ಶುರು ಮಾಡಿದವರು. ನಿಮಗೆಲ್ಲಾ ಗೊತ್ತಿರಲಿ ಜಗತ್ತಿನ ಮಿಲಿಯನೇರ್ ಮತ್ತು ಬಿಲಿಯನೇರ್ಗಳಲ್ಲಿ 85 ಪ್ರತಿಶತ ಸೆಲ್ಫ್ ಮೇಡ್. ಅವರಿಗೂ ನಿಮ್ಮಂತೆ, ನನ್ನಂತೆ ಫ್ಯಾಮಿಲಿ, ಸಂಪತ್ತು ಅಥವಾ ಗಾಡ್ಫಾದರ್ ಇರಲಿಲ್ಲ. ಇಂದಿಗೆ ಅವರು ಹಾಂಗ್ ಕಾಂಗ್ನ ಅತಿ ದೊಡ್ಡ ಶ್ರೀಮಂತರಲ್ಲಿ ಒಬ್ಬರು! ಜಾಗತಿಕ ಮಟ್ಟದಲ್ಲೂ ಅತಿ ದೊಡ್ಡ ಶ್ರೀಮಂತರ ಸಾಲಿನಲ್ಲಿ ನಿಲ್ಲುತ್ತಾರೆ. ಅವರಿಗೆ ಸಾಧ್ಯವಾದರೆ ಅದು ನಮಗೂ ಸಾಧ್ಯ. ಇಂದಿಗೆ ಶ್ರೀಮಂತಿಕೆಗೆ ಲೀ ಕ ಶಿಂಗ್ ಮಾಡೆಲ್ ಅತ್ಯಂತ ಸೂಕ್ತವಾಗಿದೆ. ಏನಿದು ಲೀ ಕ ಶಿಂಗ್ ಮಾಡೆಲ್ ಎನ್ನುವುದರ ಬಗ್ಗೆ ಪುಸ್ತಕದಲ್ಲಿ ವಿವರವಿದೆ. ಈ ಪುಸ್ತಕದಲ್ಲಿರುವ ಅಧ್ಯಾಯಗಳನ್ನು ಅನುಭವಿಸಿ ಬರೆದದ್ದು. ಅಲ್ಲಲ್ಲಿ ನನ್ನ ಬದುಕಿನ ಸನ್ನಿವೇಶಗಳ ಉಲ್ಲೇಖವನ್ನೂ ಮಾಡಿದ್ದೇನೆ. ಶ್ರದ್ಧೆ, ಬತ್ತದ ಉತ್ಸಾಹ, ಹಂಬಲದ ಬೆಂಬಲವದ್ದಿರೆ ನಾವಂದುಕೊಂಡ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಸಿರಿವಂತಿಕೆಗೆ ಸರಳ ಸೂತ್ರಗಳಿವೆ, ಅವುಗಳನ್ನು ಕೇವಲ ಓದಿ ಮುಂದಕ್ಕೆ ಹೋದರೆ ಪ್ರಯೋಜನವಿಲ್ಲ. ಇಲ್ಲಿನ ಸೂತ್ರಗಳನ್ನು ಅಳವಡಿಸಿಕೊಂಡರೆ ಎಲ್ಲರೂ ಶ್ರೀಮಂತರಾಗಬಹುದು! - Good Luck. - ರಂಗಸ್ವಾಮಿ ಮೂಕನಹಳ್ಳಿ
ರಂಗಸ್ವಾಮಿ ಮೂಕನಹಳ್ಳಿ ತುಮಕೂರು ಜಿಲ್ಲೆಯ ಸಿರಾದಲ್ಲಿ 18.05.1975ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. 23ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. ದುಬೈನಲ್ಲಿ ಮೂರು ತಿಂಗಳ ಕೆಲಸದ ನಂತರ ಸ್ಪೇನ್ ದೇಶದ ಬಾರ್ಸಿಲೋನಾ ನಗರ 2017ರವರೆಗೆ ಇವರ ಮನೆಯಾಗುತ್ತದೆ. ಈ ಮಧ್ಯೆ 2001ರಲ್ಲಿ ಇಂಗ್ಲೆಂಡ್ನ ಇನ್ಸ್ಟಿಟ್ಯೂಟ್ ಆಫ್ ಇಂಟರ್ನಲ್ ಆಡಿಟರ್ಸ್ ಸಂಸ್ಥೆಯ ಮೂಲಕ ಸರ್ಟಿಫೈಡ್ ಇಂಟರ್ನಲ್ ಆಡಿಟರ್ ಪದವಿಯನ್ನ ಪಡೆಯುತ್ತಾರೆ. ಇದರ ಜೊತೆಗೆ ಸರ್ಟಿಫೈಡ್ SAP FICO ಕನ್ಸಲ್ಟೆಂಟ್ ಮತ್ತು ಫೈನಾನ್ಸಿಯಲ್ ಕನ್ಸಲ್ಟೆಂಟ್ ಕೂಡ ಆಗಿದ್ದಾರೆ. ಶ್ರೀಯುತರು ವೃತ್ತಿ ಹಾಗೂ ಪ್ರವೃತ್ತಿಯ ಸಲುವಾಗಿ ಇಲ್ಲಿಯವರೆಗೆ ಅರವತ್ತಕ್ಕೂ ಹೆಚ್ಚು ದೇಶಗಳನ್ನ ಸುತ್ತಿದ್ದಾರೆ. ದೂರದರ್ಶನ, ಆಲ್ ಇಂಡಿಯಾ ರೇಡಿಯೋ, ಎ್ಎಂಗಳು, ಕಾಲೇಜು ಮತ್ತು ಬಿಸಿನೆಸ್ ಸ್ಕೂಲ್ಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಹಲವಾರು ಉಪನ್ಯಾಸಗಳನ್ನ ಶ್ರೀಯುತರು ನೀಡಿದ್ದಾರೆ. ಸಾವಣ್ಣ ಪ್ರಕಾಶನದ `ಷೇರು ಸಾಮ್ರಾಜ್ಯ ಕಲಿತವನೇ ಅಧಿಪತಿ' ಪುಸ್ತಕದಲ್ಲಿನ ಒಂದು ಲೇಖನ `ಷೇರು ಮಾರುಕಟ್ಟೆ ಪ್ರವೇಶಿಸುವ ಮುನ್ನ' ಮೈಸೂರು ಯೂವರ್ಸಿಟಿ ಮತ್ತು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಕುವೆಂಪು ಯೂನಿವರ್ಸಿಟಿ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಕೂಡ ಆಯ್ಕೆಯಾಗಿದೆ. ಇಲ್ಲಿಯವರೆಗೆ 1200ಕ್ಕೂ ಹೆಚ್ಚು ಪ್ರಕಟಿತ ಬರಹಗಳು ಇವರ ಹೆಸರಿನಲ್ಲಿದೆ ಹಾಗೂ 29 ಕೃತಿಗಳನ್ನು ರಚಿಸಿದ್ದಾರೆ. ಸದ್ಯಕ್ಕೆ ಮೈಸೂರಿನಲ್ಲಿ ವಾಸವಿದ್ದಾರೆ.
Books from ರಂಗಸ್ವಾಮಿ ಮೂಕನಹಳ್ಳಿ, Rangaswamy Mookanahalli

ರಂಗಸ್ವಾಮಿ ಮೂಕನಹಳ್ಳಿ, Rangaswamy Mookanahalli
About Author
ರಂಗಸ್ವಾಮಿ ಮೂಕನಹಳ್ಳಿ ತುಮಕೂರು ಜಿಲ್ಲೆಯ ಸಿರಾದಲ್ಲಿ 18.05.1975ರಂದು ಜನನ. ಪ್ರಾಥಮಿಕ ಶಿಕ್ಷಣ ಸಿರಾ ತಾಲೂಕಿನ ಹೊಸೂರು ಎನ್ನುವ ಗ್ರಾಮದಲ್ಲಿ ಆಗುತ್ತದೆ. ಮಾಧ್ಯಮಿಕ ಶಿಕ್ಷಣ ಬೆಂಗಳೂರಿನ ಪೀಣ್ಯದಲ್ಲಿನ ಸರಕಾರಿ ಶಾಲೆಯಲ್ಲಿ, ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿಕೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಓದಿ ಬೆಂಗಳೂರು ಯೂನಿವರ್ಸಿಟಿಯಿಂದ ಕಾಮರ್ಸ್ ಪದವಿ ಪಡೆಯುತ್ತಾರೆ. 23ನೆಯ ವಯಸ್ಸಿಗೆ ಕೆಲಸದ ಮೇಲೆ ದೇಶವನ್ನ ತೊರೆದು ದುಬೈ ಸೇರುತ್ತಾರೆ. ದುಬೈನಲ್ಲಿ ಮೂರು ತಿಂಗಳ ಕೆಲಸದ ನಂತರ ಸ್ಪೇನ್ ದೇಶದ ಬಾರ್ಸಿಲೋನಾ ನಗರ 2017ರವರೆಗೆ ಇವರ ಮನೆಯಾಗುತ್ತದೆ. ಈ ಮಧ್ಯೆ 2001ರಲ್ಲಿ ಇಂಗ್ಲೆಂಡ್ನ ಇನ್ಸ್ಟಿಟ್ಯೂಟ್ ಆಫ್ ಇಂಟರ್ನಲ್ ಆಡಿಟರ್ಸ್ ಸಂಸ್ಥೆಯ ಮೂಲಕ ಸರ್ಟಿಫೈಡ್ ಇಂಟರ್ನಲ್ ಆಡಿಟರ್ ಪದವಿಯನ್ನ ಪಡೆಯುತ್ತಾರೆ. ಇದರ ಜೊತೆಗೆ ಸರ್ಟಿಫೈಡ್ SAP FICO ಕನ್ಸಲ್ಟೆಂಟ್ ಮತ್ತು ಫೈನಾನ್ಸಿಯಲ್ ಕನ್ಸಲ್ಟೆಂಟ್ ಕೂಡ ಆಗಿದ್ದಾರೆ. ಶ್ರೀಯುತರು ವೃತ್ತಿ ಹಾಗೂ ಪ್ರವೃತ್ತಿಯ ಸಲುವಾಗಿ ಇಲ್ಲಿಯವರೆಗೆ ಅರವತ್ತಕ್ಕೂ ಹೆಚ್ಚು ದೇಶಗಳನ್ನ ಸುತ್ತಿದ್ದಾರೆ. ದೂರದರ್ಶನ, ಆಲ್ ಇಂಡಿಯಾ ರೇಡಿಯೋ, ಎ್ಎಂಗಳು, ಕಾಲೇಜು ಮತ್ತು ಬಿಸಿನೆಸ್ ಸ್ಕೂಲ್ಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಹಲವಾರು ಉಪನ್ಯಾಸಗಳನ್ನ ಶ್ರೀಯುತರು ನೀಡಿದ್ದಾರೆ. ಸಾವಣ್ಣ ಪ್ರಕಾಶನದ `ಷೇರು ಸಾಮ್ರಾಜ್ಯ ಕಲಿತವನೇ ಅಧಿಪತಿ' ಪುಸ್ತಕದಲ್ಲಿನ ಒಂದು ಲೇಖನ `ಷೇರು ಮಾರುಕಟ್ಟೆ ಪ್ರವೇಶಿಸುವ ಮುನ್ನ' ಮೈಸೂರು ಯೂವರ್ಸಿಟಿ ಮತ್ತು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಕುವೆಂಪು ಯೂನಿವರ್ಸಿಟಿ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಕೂಡ ಆಯ್ಕೆಯಾಗಿದೆ. ಇಲ್ಲಿಯವರೆಗೆ 1200ಕ್ಕೂ ಹೆಚ್ಚು ಪ್ರಕಟಿತ ಬರಹಗಳು ಇವರ ಹೆಸರಿನಲ್ಲಿದೆ ಹಾಗೂ 29 ಕೃತಿಗಳನ್ನು ರಚಿಸಿದ್ದಾರೆ. ಸದ್ಯಕ್ಕೆ ಮೈಸೂರಿನಲ್ಲಿ ವಾಸವಿದ್ದಾರೆ.